Sunday, September 24, 2023
Homeಮಲೆನಾಡುತಾಲೂಕು ಕಚೇರಿ ಕಟ್ಟಡದ ಸೀಲಿಂಗ್ ನ ಸಿಮೆಂಟ್ ಬಿದ್ದು ಸಿಬ್ಬಂದಿಗೆ ತೀವ್ರ ಗಾಯ

ತಾಲೂಕು ಕಚೇರಿ ಕಟ್ಟಡದ ಸೀಲಿಂಗ್ ನ ಸಿಮೆಂಟ್ ಬಿದ್ದು ಸಿಬ್ಬಂದಿಗೆ ತೀವ್ರ ಗಾಯ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಮಹಿಳಾ ಅಧಿಕಾರಿ ಒಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೇಲ್ಚಾವಣಿಯ ಸೀಲಿಂಗ್ ಸಿಮೆಂಟ್ ತಲೆಯ ಮೇಲೆ ಬಿದ್ದು ತೀವ್ರತರದ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ; ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?

ತಾಲೂಕು ಕಚೇರಿಯ ಕಟ್ಟಡ ಸಂಪೂರ್ಣ ಅವ್ಯವಸ್ಥೆಯಲ್ಲಿದ್ದು ಅನೇಕ ಬಾರಿ ಮೇಲ್ಚಾವಣಿಯ ಸೀಲಿಂಗ್ ಸಿಮೆಂಟ್ ಗಳು ಕುಸಿದು ಬೀಳುತ್ತಿರುವುದರ ಬಗ್ಗೆ ವರದಿಯಾಗಿದ್ದರು ಸಂಬಂಧಪಟ್ಟ ಇಲಾಖೆಯ ಗಮನ ವಹಿಸಿರಲಿಲ್ಲ ಆದರೆ,


ಇತ್ತೀಚಿನ ಜನಪ್ರಿಯ ಸುದ್ದಿಗಳು


ಇಂದು ಸರ್ವೆ ಇಲಾಖೆಯ ಕಚೇರಿಯಲ್ಲಿ ಮಹಿಳಾ ಅಧಿಕಾರಿ ಒಬ್ಬರು ಕರ್ತವ್ಯ ಮಾಡುತ್ತಿರುವ ವೇಳೆ ಮೇಲ್ಚಾವಣಿಯ ಸೀಲಿಂಗ್ ಸಿಮೆಂಟ್ ತಲೆಯ ಮೇಲೆ ಬಿದ್ದು ತೀವ್ರತರದ ಗಾಯವಾಗಿದ್ದು ಅವರನ್ನು ಜಯಚಾಮ ರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಬಗ್ಗೆ ತಾಲೂಕು ಆಡಳಿತದ ಅಧಿಕಾರಿಗಳು ಗಮನ ವಹಿಸಬೇಕಿದೆ.

ಇದನ್ನೂ ಓದಿ; ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ

ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Most Popular

Recent Comments