Monday, December 11, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕುಡಿದ ಮತ್ತಿನಲ್ಲಿ ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ಸಿನ ಗ್ಲಾಸ್ ಒಡೆದು, ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.

ಇದನ್ನೂ ಓದಿ; ಗಮನಿಸಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಹೀಗಿದೆ 07-07-2023

ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಬಸ್ಸಿನ ಮೇಲೆ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕ ಸತೀಶ್ ಅವರನ್ನು ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದ್ದು, ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಪತಿಯ ಪ್ರಿಯತಮೆಯಿಂದಲೇ ನಡೀತಾ ಪತ್ನಿಯ ಭೀಕರ ಕೂಲೆ?

ಮೂಡಿಗೆರೆ: ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಸರ್ಕಾರಿ ಬಸ್ಸುಗಳ ನಡೆವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ ಗಳ ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು ಈ ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗಿದೆ. 2019 ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯದೇ ಇರದ ಕಾರಣ ಈ ಅಪಘಾತ ಸಂಭವಿಸಿದ್ದು, ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹಿಸಲಾಗಿದೆ. ಹಾಗೂ ಚಾರ್ಮಾಡಿ ಘಾಟಿಯ ಮಂಜು ಕೂಡ ಕಾರಣ ಎನ್ನಲಾಗಿದೆ. ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಅಡಿ ದೂರದಲ್ಲಿ ಇರುವವರು ಕಾಣದಂತಹಾ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಅಪಘಾತದಿಂದ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಘಾಟಿಯಲ್ಲಿ ಸಿಲುಕಿ ವಾಹನ ಸವಾರರ ಪರದಾಡುವಂತೆ ಆಗಿದೆ. ಇನ್ನು ಕೆಲ ಪ್ರಯಾಣಿಕರು 10 ಕಿ.ಮೀ. ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

Most Popular

Recent Comments