ಮೂಡಿಗೆರೆ; (ನ್ಯೂಸ್ ಮಲ್ನಾಡ್ ವರದಿ) ವಾರದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದೀಪುರದಲ್ಲಿ ನಡೆದಿದೆ. ರವಿ(36) ಶವವಾಗಿ ಪತ್ತೆಯಾದ ವ್ಯಕ್ತಿ.
ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ವಾರದ ಹಿಂದೆ ನಾಪತ್ತೆಯಾಗಿದ್ದು, ನಂದೀಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದೇಹ ಕೊಳೆತ ಸ್ಥಿತಿಯಲ್ಲಿದ್ದು ಕಾರಣವೇನೆಂಬುದು ತಿಳಿದು ಬಂದಿಲ್ಲ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
- ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 425 ಮದ್ಯದ ಬಾಕ್ಸ್ ವಶ
- ಭದ್ರ ನದಿಯ ಆಳ ಕೇಳುತ್ತಿದ್ದ ವೃದ್ದೆ ನಾಪತ್ತೆ
ಮೂಡಿಗೆರೆ ಪೋಲೀಸ್ ಸ್ಥಳ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದಲ್ಲಿ “ಶ್ರೀ ಲಕ್ಷ್ಮೀನರಸಿಂಹ ಜಯಂತಿ ಮಹೋತ್ಸವ”
ಜಯಪುರ/ಹರಿಹರಪುರ: ಹರಿಹರಪುರದ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದಲ್ಲಿ ಮೇ 4ರ ಗುರವಾರದಂದು ಶ್ರೀ ಲಕ್ಷ್ಮೀನರಸಿಂಹ ಜಯಂತಿ ಮಹೋತ್ಸವ ನಡೆಯಲಿದೆ.
ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ಬೆಳಗ್ಗೆ 9 ಕ್ಕೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಗೆ ಕಲ್ಪೋಕ್ತ ಪೂಜೆ, ಲಕ್ಷ ತುಳಸಿ ಅರ್ಚನೆ ಹಾಗೂ ಶ್ರೀ ಲಕ್ಷ್ಮೀನರಸಿಂಹ ಸಹಸ್ರನಾಮ ಪಾರಾಯಣ ನಡೆಯಲಿದೆ. 11.30ಕ್ಕೆ ಪರಮಪೂಜ್ಯ ಜಗಧ್ಗುರುಗಳಾದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಚನ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಡಾ. ಅರಳು ಮಲ್ಲಿಗೆ ಪಾರ್ಥಸಾರಥಿ, ಕರ್ನಾಟಕ ಬ್ಯಾಂಕಿನ ನಿವೃತ್ತ ಚೇರ್ಮನ್ ಮಹಬಲೇಶ್ವರ ಭಟ್, ಸಾಮಾಜಿಕ ಕಾರ್ಯಕರ್ತರಾದ ದೇವಾನಂದ್ ಹಾಗೂ ಶ್ರೀ ಮಠದ ಭಕ್ತರು ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ; ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ; 15 ಮಂದಿಗೆ ಗಾಯ
ಸಂಜೆ 5ಕ್ಕೆ ಕಲ್ಯಾಣೋತ್ಸವ 7ಕ್ಕೆ ರಥೋತ್ಸವ, ರಾತ್ರಿ 8ಕ್ಕೆ ಬೈಂದೂರಿನ ಧಾರೇಶ್ವರ ಯಕ್ಷ ಚಾರಿಟೇಬಲ್ ಟ್ರಸ್ಟ್ ನ ಕಲಾವಿದರಿಂದ ” ರಾವಣ ಮೋಕ್ಷ” ಎಂಬ ಯಕ್ಷಗಾನ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.