ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಎಫ್ಎಸ್ಟಿ ಮತ್ತು ಎಸ್ ಎಸ್ಟಿ ತಂಡವು ಮಂಗಳವಾರ ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿ 8,65,712 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ, ಕಡೂರು ತಾಲೂಕಿನ ಚೌಡಿಪಾಳ್ಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ. 59,500 ರೂ. ನಗದು, ಮತ್ತೊಂದು ಪ್ರಕರಣದಲ್ಲಿ 1,08,350 ರೂ., ಬಿಟ್ಟೇನಹಳ್ಳಿ ಗೇಟ್ ಬಳಿ 1,30,200 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ಭಕ್ತನಕಟ್ಟೆ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 64,162 ರೂ. ನಗದು, ಅಹಮದನಗರ ಚೆಕ್ಪೋಸ್ಟ್ ನಲ್ಲಿ 60 ಸಾವಿರ ರೂ., ಅಲದಹಳ್ಳಿ ಗೇಟ್ ಬಳಿ ದಾಖಲೆ ಇಲ್ಲದ 1,19,650 ರೂ., ಕೊಪ್ಪ ತಾಲೂಕಿನ ದಾಖಲೆ ಇಲ್ಲದ 89,850 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
- ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 425 ಮದ್ಯದ ಬಾಕ್ಸ್ ವಶ
- ಭದ್ರ ನದಿಯ ಆಳ ಕೇಳುತ್ತಿದ್ದ ವೃದ್ದೆ ನಾಪತ್ತೆ
ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದಲ್ಲಿ “ಶ್ರೀ ಲಕ್ಷ್ಮೀನರಸಿಂಹ ಜಯಂತಿ ಮಹೋತ್ಸವ”
ಜಯಪುರ/ಹರಿಹರಪುರ: ಹರಿಹರಪುರದ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದಲ್ಲಿ ಮೇ 4ರ ಗುರವಾರದಂದು ಶ್ರೀ ಲಕ್ಷ್ಮೀನರಸಿಂಹ ಜಯಂತಿ ಮಹೋತ್ಸವ ನಡೆಯಲಿದೆ.
ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ಬೆಳಗ್ಗೆ 9 ಕ್ಕೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಗೆ ಕಲ್ಪೋಕ್ತ ಪೂಜೆ, ಲಕ್ಷ ತುಳಸಿ ಅರ್ಚನೆ ಹಾಗೂ ಶ್ರೀ ಲಕ್ಷ್ಮೀನರಸಿಂಹ ಸಹಸ್ರನಾಮ ಪಾರಾಯಣ ನಡೆಯಲಿದೆ. 11.30ಕ್ಕೆ ಪರಮಪೂಜ್ಯ ಜಗಧ್ಗುರುಗಳಾದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಚನ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಡಾ. ಅರಳು ಮಲ್ಲಿಗೆ ಪಾರ್ಥಸಾರಥಿ, ಕರ್ನಾಟಕ ಬ್ಯಾಂಕಿನ ನಿವೃತ್ತ ಚೇರ್ಮನ್ ಮಹಬಲೇಶ್ವರ ಭಟ್, ಸಾಮಾಜಿಕ ಕಾರ್ಯಕರ್ತರಾದ ದೇವಾನಂದ್ ಹಾಗೂ ಶ್ರೀ ಮಠದ ಭಕ್ತರು ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ; ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ; 15 ಮಂದಿಗೆ ಗಾಯ
ಸಂಜೆ 5ಕ್ಕೆ ಕಲ್ಯಾಣೋತ್ಸವ 7ಕ್ಕೆ ರಥೋತ್ಸವ, ರಾತ್ರಿ 8ಕ್ಕೆ ಬೈಂದೂರಿನ ಧಾರೇಶ್ವರ ಯಕ್ಷ ಚಾರಿಟೇಬಲ್ ಟ್ರಸ್ಟ್ ನ ಕಲಾವಿದರಿಂದ ” ರಾವಣ ಮೋಕ್ಷ” ಎಂಬ ಯಕ್ಷಗಾನ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.