Watermelon: ಇತ್ತೀಚಿನ ದಿನಗಳಲ್ಲಂತೂ ಮಾರುಕಟ್ಟೆಯಲ್ಲಿ ಕೆಲವು ವ್ಯಾಪಾರಿಗಳು ಹಣ್ಣುಗಳಿಗೆ ಕೃತಕ ಬಣ್ಣಗಳನ್ನು ಬೇರೆಸಿ ಮಾರಾಟ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ಗ್ರಾಹಕರಿಗೆ ಹೆಚ್ಚು ಆಕರ್ಷಕವಾಗಿ ಕಾಣಲಿ ಎಂಬ ಕಾರಣಕ್ಕೆ ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳನ್ನು ಬಳಸುತ್ತಿದ್ದಾರೆ.
ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ಕಲ್ಲಂಗಡಿ ಹಣ್ಣು(Watermelon) ಹೆಚ್ಚಾಗಿ ಸಿಗುತ್ತದೆ. ಇದನ್ನು ಬೇಸಿಗೆಯ ಹಣ್ಣು ಎಂದೇ ಹೇಳಬಹುದು. ಕಲ್ಲಂಗಡಿ ಹಣ್ಣು ಅಧಿಕ ನೀರಿನಾಂಶವನ್ನು ಹೊಂದಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆಯದು, ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಿಡಲು ಸಹಾಯ ಮಾಡುತ್ತದೆ. ಇದು ಸಿಹಿಯಾಗಿರುವುದರಿಂದ ಪ್ರತಿಯೊಬ್ಬರಿಗೂ ಕಲ್ಲಂಗಡಿ ಹಣ್ಣು ಇಷ್ಟವಾಗುತ್ತದೆ.
ಇದನ್ನೂ ಓದಿ: ಅಡುಗೆಗೆ ಬಳಸುವ ಮೆಣಸಿನ ಪುಡಿ ಅಸಲಿನ? ನಕಲಿನ? ಜಸ್ಟ್ ಹೀಗೆ ಪತ್ತೆ ಹಚ್ಚಿ..
ಆದರೆ ನೋಡಲು ಕೆಂಪು ಕೆಂಪಾಗಿರುವ ಕಲ್ಲಂಗಡಿ ಹಣ್ಣನ್ನು(Watermelon) ಖರೀದಿಸುವ ಮುನ್ನ ಅವು ತಿನ್ನಲು ಸೂಕ್ತವಾಗಿದೆಯೇ ಎಂಬುವುದನ್ನು ಪತ್ತೆ ಹಚ್ಚುವುದು ಬಹಳ ಮುಖ್ಯ. ಕೆಲವು ಹಾನಿಕಾರಕ ರಾಸಾಯನಿಕಗಳ ಬಳಕೆಯಿಂದ ಕಲ್ಲಂಗಡಿ ಹಣ್ಣಿನ ಬಣ್ಣವನ್ನು ಹೆಚ್ಚಿಸಬಹುದು. ಕೆಲವೊಮ್ಮೆ ಕಲ್ಲಂಗಡಿಗೆ ಕೃತಕ ಬಣ್ಣವನ್ನು ಸೇರಿಸಲಾಗುತ್ತದೆ. ಇದು ಕಲ್ಲಂಗಡಿ ಹಣ್ಣಿನ ನೈಸರ್ಗಿಕ ಮಾಧುರ್ಯವನ್ನು ತೆಗೆದು ಹಾಕುತ್ತದೆ. ಜೊತೆಗೆ ಫುಡ್ ಪಾಯ್ಸನಿಂಗ್ ಮತ್ತು ಜೀರ್ಣಕಾರಿ ಸಮಸ್ಯೆಗಳು ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.
ನೈಸರ್ಗಿಕವಾಗಿ ಮಾಗಿದ ಕಲ್ಲಂಗಡಿ ಹಣ್ಣನ್ನು ಗುರುತಿಸುವುದು ಹೇಗೆ?
ಹಣ್ಣಿನ ಕೆಳಭಾಗವನ್ನು ಪರಿಶೀಲಿಸಿ:
ಹಣ್ಣಿನ ಕೆಳ ಭಾಗವು ನೈಸರ್ಗಿಕವಾಗಿ ತಿಳಿ ಹಳದಿ ಬಣ್ಣದ್ದಾಗಿರುತ್ತದೆ. ಇದನ್ನು ಹೊರತುಪಡಿಸಿ ಇಡೀ ಕಲ್ಲಂಗಡಿ ಹಣ್ಣು ಒಂದೇ ಬಣ್ಣದ್ದಲ್ಲಿದ್ದರೆ, ಇದಕ್ಕೆ ಕೃತಕ ಬಣ್ಣವನ್ನು ಬೆರೆಸಿರಬಹುದು.
ಇದನ್ನೂ ಓದಿ: ನಿಮಗೂ ತಲೆಹೊಟ್ಟಿನ ಸಮಸ್ಯೆ ಕಾಡುತ್ತಿದೆಯಾ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ನೀರಿನಲ್ಲಿ ಬೆರೆಸಿ:
ಒಂದು ಸಣ್ಣ ಪೀಸ್ ಕಲ್ಲಂಗಡಿ ಹಣ್ಣನ್ನು ನೀರಿನಲ್ಲಿ ಬೆರೆಸಿ, ಆಗ ನೀರು ಗುಲಾಬಿ ಬಣ್ಣಕ್ಕೆ ತಿರುಗಿದರೆ, ಕಲ್ಲಂಗಡಿ ಹಣ್ಣಿಗೆ ಕೃತಕ ಬಣ್ಣ ಸೇರಿಸಲಾಗಿದೆ ಎಂದರ್ಥ.
ಬೀಜಗಳ ಮೂಲಕ ಪತ್ತೆ;
ನೈಸರ್ಗಿಕ ಕಲ್ಲಂಗಡಿ ಬೀಜಗಳು ಕಂದು ಮತ್ತು ಕಪ್ಪು ಬಣ್ಣದಲ್ಲಿರುತ್ತವೆ. ಅಲ್ಲದೇ, ಕಲ್ಲಂಗಡಿಯ ಒಳಭಾಗವು ಕೆಂಪು ಬಣ್ಣದ್ದಲಿರುತ್ತದೆ. ಆದರೆ ಇದು ಕೃತಕವಾಗಿ ಕಾಣುವುದಿಲ್ಲ.
ಕೃತಕ ಕಲ್ಲಂಗಡಿ ಬೀಜಗಳು ಬಿಳಿ ಬಣ್ಣದಲ್ಲಿರುತ್ತವೆ. ಇವು ಒಳಗಿನಿಂದ ಗಾಢ ಕೆಂಪು ಬಣ್ಣದಲ್ಲಿ ಕಾಣುತ್ತವೆ. ಆದರೆ ಕೆಲವೊಮ್ಮೆ ಕೈಗಳಿಗೆ ಈ ಬಣ್ಣ ಆಗುವ ಸಾಧ್ಯತೆ ಇರುತ್ತದೆ.
ಇದನ್ನೂ ಓದಿ: ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ ಸಾಲ 50ರಷ್ಟು ಸಬ್ಸಿಡಿ.!
ಕೆಂಪು ಬಣ್ಣಕ್ಕೆ ಮಾರು ಹೋಗಬೇಡಿ:
ಕೆಂಪು, ರಸಭರಿತವಾದ ಕಲ್ಲಂಗಡಿ ಹಣ್ಣು (Watermelon) ಆಕರ್ಷಕವಾಗಿ ಕಾಣಿಸಬಹುದು. ಆದರೆ ಇದರ ಹಿಂದಿರ ಹಿಂದಿನ ಕಾರಣವೇನು ಎಂಬುವುದನ್ನು ಗುರುತಿಸುವುದು ಮುಖ್ಯ. ಹಾಗಾಗಿ ಯಾವಾಗಲೂ ಸುರಕ್ಷಿತ ಮತ್ತು ನೈಸರ್ಗಿಕ ಹಣ್ಣುಗಳನ್ನು ಆರಿಸಿ.
ಇದನ್ನೂ ಓದಿ: ಬಿಎಸ್ಎನ್ಎಲ್ ನಲ್ಲಿ ಉದ್ಯೋಗವಕಾಶ ಸಂಬಳ ಎಷ್ಟು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಕಲ್ಲಂಗಡಿ ಹಣ್ಣು ತಿಂದ ನಂತರ ಯಾವ ಆಹಾರ ಸೇವಿಸಬಾರದು;
* ಮೊಟ್ಟೆ:
ಮೊಟ್ಟೆ ಮತ್ತು ಕಲ್ಲಂಗಡಿಯನ್ನು ಒಟ್ಟಿಗೆ ಸೇವಿಸಬಾರದು. ಎರಡರ ಸ್ವಭಾವವು ವಿಭಿನ್ನವಾಗಿದೆ, ಇದು ಹೊಟ್ಟೆ ಉಬ್ಬುವುದು ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಇವೆರಡೂ ಹೊಟ್ಟೆಯಲ್ಲಿ ಪರಸ್ಪರ ಜೀರ್ಣಿಸಿಕೊಳ್ಳಲು ಅನುಮತಿಸುವುದಿಲ್ಲ. ಇದು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು.
* ಹಾಲು:
ಕಲ್ಲಂಗಡಿ ಹಣ್ಣು ತಿಂದ ನಂತರ ಹಾಲು ಕುಡಿಯಬಾರದು ಇದರಿಂದ ಆರೋಗ್ಯಕ್ಕೆ ಹಾನಿಯಾಗಬಹುದು. ಕಲ್ಲಂಗಡಿಯಲ್ಲಿ ವಿಟಮಿನ್ ಸಿ ಇದೆ, ಇದು ಹಾಲಿನೊಂದಿಗೆ ಪ್ರತಿಕ್ರಿಯಿಸುತ್ತದೆ. ಇದು ಹೊಟ್ಟೆ ಉಬ್ಬುವಿಕೆಯ ಸಮಸ್ಯೆಯನ್ನು ಉಂಟುಮಾಡಬಹುದು. ಕಳಪೆ ಜೀರ್ಣಕ್ರಿಯೆ ಮತ್ತು ಅಜೀರ್ಣದ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ ಕಲ್ಲಂಗಡಿ ಹಣ್ಣು ಮತ್ತು ಹಾಲಿನ ಸಂಯೋಜನೆಯನ್ನು ಉತ್ತಮವೆಂದು ಪರಿಗಣಿಸಲಾಗುವುದಿಲ್ಲ.
ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಲಭ್ಯ ಎಷ್ಟು ಸ್ಕಾಲರ್ಶಿಪ್? ಅರ್ಜಿ ಸಲ್ಲಿಕೆ ಹೇಗೆ?
* ಹೆಚ್ಚಿನ ಪ್ರೋಟೀನ್ ಆಹಾರಗಳು;
ಕಲ್ಲಂಗಡಿ ಹಣ್ಣು ತಿಂದ ನಂತರ ಪ್ರೊಟೀನ್ ಹೆಚ್ಚಿರುವ ಆಹಾರವನ್ನು ಎಂದಿಗೂ ಸೇವಿಸಬಾರದು. ವಿಟಮಿನ್ಸ್ ಮತ್ತು ಮಿನರಲ್ಸ್ ಜೊತೆಗೆ ಕಲ್ಲಂಗಡಿಯಲ್ಲಿ ಪಿಷ್ಟವೂ ಇದ್ದು, ಇದು ಜೀರ್ಣಾಂಗ ವ್ಯವಸ್ಥೆಗೆ ಹಾನಿ ಮಾಡುವುದಲ್ಲದೆ ಇನ್ನೂ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು.
* ಉಪ್ಪು;
ಉಪ್ಪನ್ನು ಕಲ್ಲಂಗಡಿ ಹಣ್ಣಿನ ಜೊತೆ ಅಥವಾ ನಂತರ ತಿನ್ನಬಾರದು. ಹಾಗೆ ಮಾಡುವುದರಿಂದ ಹಾನಿಕಾರಕವಾಗಬಹುದು. ಕಲ್ಲಂಗಡಿಯೊಂದಿಗೆ ಉಪ್ಪನ್ನು ತಿನ್ನುವುದರಿಂದ, ಅದರ ಪೋಷಕಾಂಶಗಳು ದೇಹದಲ್ಲಿ ಸರಿಯಾಗಿ ಹೀರಲ್ಪಡುವುದಿಲ್ಲ, ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಅಥವಾ ಕಡಿಮೆ ಮಾಡುತ್ತದೆ ಮತ್ತು ಹೃದಯದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಈ ಯೋಜನೆಯಲ್ಲಿ 20 ರೂ ಪಾವತಿ ಮಾಡಿ 2 ಲಕ್ಷ ಪಡೆಯಿರಿ ಯಾವ ಯೋಜನೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





