Y.S.V Datta: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಡೂರು ಮಾಜಿ ಶಾಸಕ ವೈ.ಎಸ್.ವಿ ದತ್ತ ಅವರು ಸ್ಮಗ್ರಾಮದಲ್ಲಿರುವ ಯಗಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಜೊತೆ ಸರದಿ ಸಾಲಿನಲ್ಲಿ ಕುಳಿತು ಪ್ರಾರ್ಥನೆ ಸಲ್ಲಿಸಿ ಹೊಳಿಗೆ ಊಟ ಮಾಡಿ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ; ಹಿಂದೂ ದೇಗುಲಗಳೇ ಟಾರ್ಗೆಟ್; 150 ವರ್ಷ ಹಳೆಯ ಹಿಂದೂ ದೇವಾಲಯ ನೆಲಸಮ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು, ಅದೇ ಶಾಲೆಯಲ್ಲಿ ಓದಿ ಬೆಳೆದ ದತ್ತ ಅವರ ಸಹೋದರಿ ವಿಜಯಲಕ್ಷ್ಮಿ ಅವರ ಸ್ಮರಣಾರ್ಥ ಮಕ್ಕಳಿಗೆ ಓದಿನ ಸಾಮಾಗ್ರಿಗಳ ಜೊತೆಗೆ ಬಸವಣ್ಣ, ಡಿವಿಜಿ ಹಾಗೂ ಅಂಬೇಡ್ಕರ್ ಅವರ ಪುಸ್ತಕವನ್ನು ನೀಡಿದ್ದಾರೆ.
ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 17-07-2023
Y.S.V Datta: 153 ವರ್ಷಗಳ ಹಿಂದಿನ ಶಾಲೆ ಇದಾಗಿದ್ದು, ರಾಜ್ಯವ್ಯಾಪ್ತಿಯಲ್ಲಿಯೇ ದೊಡ್ಡ ಕೊಡುಗೆ ನೀಡಿದೆ. ಈ ಶಾಲೆಯಲ್ಲಿ ಓದಿದ ಅನೇಕರು ಅತ್ಯುನ್ನತ ಹುದ್ದೆಗೇರಿದ್ದಾರೆ. ಅದರಲ್ಲಿ ವಿಜಯಲಕ್ಷ್ಮಿ ಕೂಡ ಒಬ್ಬರು. ದೊಡ್ಡ ಜ್ಞಾನ ಸಂಪಾದಿಸಿದ್ದ ವಿಜಯಲಕ್ಷ್ಮಿ ಶಿಕ್ಷಣ ಪ್ರೇಮಿಯಾಗಿದ್ದರು ಎಂದರು. 60 ವರ್ಷಗಳ ಹಿಂದೆ ನಾನೂ ಕೂಡ ಈ ಶಾಲೆಯ ವಿದ್ಯಾರ್ಥಿಯಾಗಿದ್ದ ನೆನಪು ಸದಾ ಜೀವಂತವಾಗಿರುತ್ತದೆ ಎಂದಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ನರಿಗಳು ಘೀಳಿಟ್ರೆ ಕಾಡಿನ ರಾಜ ಬೆದರೋದು ಉಂಟಾ?; ಜೆಡಿಎಸ್- ಬಿಜೆಪಿ ಮೈತ್ರಿ: ಸಿ.ಟಿ. ರವಿ ಹೇಳಿದ್ದೇನು ಗೊತ್ತಾ?
- ಚಿಕ್ಕಮಗಳೂರು: ಕಾಫಿನಾಡ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
- ನೇತ್ರಾವತಿ ಪೀಕ್ ಚಾರಣಕ್ಕೆ 300 ಮಂದಿಗಷ್ಟೇ ಅವಕಾಶ; ಪ್ರವಾಸಿಗರಿಗೆ ನಿರಾಸೆ
ರುಕ್ಮಿಣಿ ಸಾವಿನ ನಂತರ ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿರುವ ಕಣ್ಣನ್ ಆಡಿಯೋ ಲಭ್ಯವಾಗಿದೆ ಎಂದು ಆರೋಪಿಸಿರುವ ಪೋಷಕರು ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರು: ಕಾಫಿನಾಡ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ; ಆರೇ ತಿಂಗಳಿಗೆ ಬಂದ ಟೂರಿಸ್ಟ್ ಎಷ್ಟು ಗೊತ್ತಾ..?
chikkamagaluru tourist: ಚಿಕ್ಕಮಗಳೂರು (ನ್ಯೂಸ್ ಮಲ್ನಾಡ್ ವರದಿ): ಕಾಫಿನಾಡು ಕೇವಲ ಜಿಲ್ಲೆಯಲ್ಲ. ಧಾರ್ಮಿಕವಾಗಿ ಬಂದ್ರಂತು ಒಂದೆಡೆ ಅನ್ನ ನೀಡೋ ಅನ್ನದಾತೆ. ಇನ್ನೊಂದೆಡೆ ವಿದ್ಯೆ ನೀಡೋ ವಿದ್ಯಾದೇವತೆ. ಪ್ರವಾಸಿಗರಿಗಂತೂ ನಿಂತಲ್ಲೆ ಮೈಮರೆಸೋ ಹಾಟ್ ಸ್ಪಾಟ್. ಇಲ್ಲಿನ ಸುಂದರ ರಮಣೀಯ ತಾಣಗಳು ವರ್ಷಪೂರ್ತಿ ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಲೇ ಇರುತ್ತೆ. ಪ್ರತಿ ವರ್ಷ ಕಾಫಿನಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತೆ.
ಇದನ್ನೂ ಓದಿ; ಜಯಪುರ: ಡಿಶ್ ರಿಪೇರಿ ಬಶೀರನಿಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಹೊಡೆದ ಜನ
chikkamagaluru tourist: ದಾಖಲೆಯ ಪ್ರಮಾಣದಲ್ಲಿ ಪ್ರವಾಸಿಗರ ಸಂಖ್ಯೆ:
ಹೌದು ಪ್ರತಿ ವರ್ಷ ಕಾಫಿನಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತೆ. ಆದರೆ ಈ ವರ್ಷ ಅಂತೂ ಆರೇ ತಿಂಗಳಿಗೆ 30 ಲಕ್ಷ ಪ್ರವಾಸಿಗರು ಭೇಟಿ ನೀಡಿರುವುದು ಪ್ರವಾಸೋದ್ಯಮ ಇಲಾಖೆ ಅಂಕಿ ಅಂಶಗಳಿಂದ ಹೊರಬಂದಿದೆ.
ಗ್ಯಾರಂಟಿ ಯೋಜನೆಯದ್ದು ಇದೆ ಪಾಲು:
ಇಲ್ಲಿನ ಪ್ರಕೃತಿ ಸೌಂದರ್ಯವನ್ನ ಅನುಭವಿಸೋಕೆ ವರ್ಷ ಪೂರ್ತಿ ಪ್ರವಾಸಿಗರು ಹರಿದು ಬರ್ತಾರೆ. ಎರಡು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಜೂನ್ ಒಂದೇ ತಿಂಗಳಿಗೆ ಜಿಲ್ಲೆಗೆ ಏಳು ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. 2023ರ ಜನವರಿಯಿಂದ ಜೂನ್ 30 ರವರೆಗೆ ಸುಮಾರು 30 ಲಕ್ಷದಷ್ಟು ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು ಈ ವರ್ಷದ ಕೊನೆಗೆ ಜಿಲ್ಲೆಗೆ ಭೇಟಿ ನೀಡಿರೋ ಪ್ರವಾಸಿಗರ ಸಂಖ್ಯೆ ಕೋಟಿ ದಾಟೋದ್ರಲ್ಲಿ ಅನುಮಾನವಿಲ್ಲ. ಕಾಫಿನಾಡಿಗೆ ಪ್ರವಾಸಿಗರ ದಂಡು ಹರಿದು ಬರಲು ಒಂದು ಕಾರಣ ಗ್ಯಾರಂಟಿ ಸರ್ಕಾರದ ಶಕ್ತಿಯ ಯೋಜನೆಯ ಪಾಲು ಕೂಡ ಒಂದಷ್ಟು ಇದೆ ಅಂತನೆ ಹೇಳಬಹುದು.