Sunday, October 1, 2023
Homeಮಲೆನಾಡುಚಿಕ್ಕಮಗಳೂರುಕೊಪ್ಪ: ಜಿಲ್ಲೆಯಲ್ಲಿ ಇಂದು "ಯೋಗಿ ಆದಿತ್ಯನಾಥ್" ಹವಾ

ಕೊಪ್ಪ: ಜಿಲ್ಲೆಯಲ್ಲಿ ಇಂದು “ಯೋಗಿ ಆದಿತ್ಯನಾಥ್” ಹವಾ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಆಗಮಿಸಿದ್ದು , ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಫೈಟ್ ನಡೆಯಲಿದ್ದು, ಈ ಹಿನ್ನೆಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಜನರ ಗಮನ ಸೆಳೆದು ಮತಬೇಟೆಯಾಡಲು ಚಿಕ್ಕಮಗಳೂರು ಜಿಲ್ಲೆಗೆ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ; ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಇದನ್ನೂ ಓದಿ; ಕಾಂಗ್ರೆಸ್ ದೇಶದ ಸಮಗ್ರತೆಗೆ ಅಪಾಯಕಾರಿ – ಸಿ.ಟಿ.ರವಿ

ಕೊಪ್ಪ ಪಟ್ಟಣದ ಲಾಲ್ ಬಹುದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ಎನ್ ಜೀವರಾಜ್ ಪರ ಪ್ರಚಾರ ನಡೆಸಿದರು.

ಭಾರತ ಇನ್ಪ್ಸಾರ್ಚರ್ ಅಭಿವೃದ್ದಿಯಲ್ಲಿ ಮುಂದಿದೆ ರೈಲು ನಿಲ್ದಾಣ, ವಿಮಾನ ನಿಲ್ದಾಣ, ಸೇತುವೆಗಳು ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯವನ್ನು ಡಬಲ್ ಇಂಜಿನ್ ಸರ್ಕಾರ ಮಾಡಿದೆ.

ಕೊರೊನಾ ಸಮಯದಲ್ಲಿ ಸರ್ಕಾರ ಉಚಿತವಾಗಿ ಲಸಿಕೆ ನೀಡಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ ದಂಗೆ ಎಬ್ಬಿಸುವ ಪಿಎಫ್ ಐ ಗೆ ಬೆಂಬಲಿಸುತ್ತಿದೆ, ಉತ್ತರ ಪ್ರದೇಶದ ಶಾಂತಿ,ಸಾಹಾರ್ದ, ಸುರಕ್ಷಿತವಾಗಿದೆ ಇದಕ್ಕೆ ಕಾರಣ ಡಬಲ್ ಇಂಜಿನ್ ಸರ್ಕಾರವಿದೆ. ಹಾಗಾಗಿ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರದ ಅಗತ್ಯವಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಮೋದಿ ಟೀಮ್ ಇಂಡಿಯಾದ ಕ್ಯಾಪ್ಟಾನ್ ಆಗಿದ್ದಾರೆ ನಾವು ಅವರನ್ನು ಬೆಂಬಲಿಸಬೇಕು ಜನವರಿ 2024 ರಲ್ಲಿ ರಾಮಮಂದಿರ ನಿರ್ಮಾಣ ಸಂಪೂರ್ಣಗೊಳ್ಳುತ್ತದೆ. ಹಾಗೇ ಶೃಂಗೇರಿ ಪಾವನ ಕ್ಷೇತ್ರ ಶಂಕರರು, ಋಷ್ಯ ಶೃಂಗರ ಪುಣ್ಯ ಭೂಮಿ ಇಂತ ಪುಣ್ಯ ಭೂಮಿಯಲ್ಲಿ ಡಿ.ಎನ್ ಜೀವರಾಜ್ ಅವರನ್ನು ಗೆಲ್ಲಿಸಿ ಎಂದು ಹೇಳಿದರು,

ಭಾ ಜ ಪಾ ದ ಈ ಸಮಾವೇಶ ದಲ್ಲಿ ರಾಷ್ಟೀಯ ವಕ್ತಾರ ಸತೀಶ್, ವಿಕ್ರಮ್, ಪುಷ್ಕರ್ ಕಾಳ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಡಿ. ಏನ್ ಜೀವರಾಜ್, ಎಸ್.ಏನ್ ರಾಮಸ್ವಾಮಿ ಹಾಗೂ ಇನ್ನಿತರ ಮುಖಂಡರು ಭಾಗಿಯಾಗಿದ್ದರು

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಚೆಕ್ ಮಾಡಬೇಕೇ; ಇಲ್ಲಿದೆ‌ ಸರಳ ವಿಧಾನ, ಹೀಗೆ ಪರಿಶೀಲಿಸಿ.

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ನಡೆಯಲಿದ್ದು, ವೋಟರ್ ಐಡಿ ಪ್ರಮುಖ ದಾಖಲೆಯಾಗಿದೆ ಏಕೆಂದರೆ ಚುನಾವಣೆಯಲ್ಲಿ ಮತ ಚಲಾಯಿಸುವುದು ಅತ್ಯಗತ್ಯ. ಎಲ್ಲಾ ಅರ್ಹ ನಾಗರಿಕರಿಗೆ ಮಾನ್ಯವಾದ ಮತದಾರರ ಗುರುತಿನ ಚೀಟಿಯ ಅಗತ್ಯವಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬ ಸಂಶಯ ಹಲವರನ್ನು ಕಾಡುತ್ತಿರಬಹುದು. ಈ ಗೊಂದಲ ನಿವಾರಿಸುವ ವಿಧಾನ ಇಲ್ಲಿ ವಿವರಿಸುತ್ತೇವೆ.

ಇದನ್ನೂ ಓದಿ; ʻಕೈ ʼ-jds ಕಾರ್ಯಕರ್ತರ ನಡುವೆ ಘರ್ಷಣೆ

ಒಂದು ನಿರ್ದಿಷ್ಟ ಕ್ಷೇತ್ರದ ಮತದಾರರ ಹೆಸರು ಮತ್ತು ಇತರ ವಿವರಗಳನ್ನು ಒಳಗೊಂಡಿರುವ ಸಮಗ್ರ ಮಾಹಿತಿಯನ್ನು ಮತದಾರರ ಪಟ್ಟಿ ಎಂದು ಕರೆಯಲಾಗುತ್ತದೆ. ಭಾರತದ ಚುನಾವಣಾ ಆಯೋಗವು ನಿಯಮಿತವಾಗಿ ನವೀಕರಿಸಿದ ಮತದಾರರ ಪಟ್ಟಿಯನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತದೆ. ಆನ್ ಲೈನ್ ಮೂಲಕ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂದು ಪತ್ತೆ ಹಚ್ಚಬಹುದು.

ಮತದಾರರ ಗುರುತಿನ ಚೀಟಿ ಎಂದರೇನು?
ಮತದಾರರ ಗುರುತಿನ ಚೀಟಿ ಅಥವಾ ಚುನಾವಣಾ ಕಾರ್ಡ್ ಭಾರತದ ಚುನಾವಣಾ ಆಯೋಗವು(election commission) ತನ್ನ ಮತವನ್ನು ಚಲಾಯಿಸಲು ಅರ್ಹರಾಗಿರುವ ಭಾರತೀಯ ನಾಗರಿಕರಿಗೆ ನೀಡಿದ ಫೋಟೋ ಗುರುತಿನ ಪುರಾವೆಯಾಗಿದೆ. ಮತದಾರರ ನೋಂದಣಿ ಕಾರ್ಡ್ ಎಂದೂ ಕರೆಯಲ್ಪಡುವ ಮತದಾರರ ಗುರುತಿನ ಚೀಟಿಯು ಒಬ್ಬರ ಪೌರತ್ವದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ, ಒಬ್ಬ ವ್ಯಕ್ತಿಯನ್ನು ಭಾರತದಲ್ಲಿ ಮತ ಚಲಾಯಿಸಲು ಅರ್ಹರನ್ನಾಗಿ ಮಾಡುತ್ತದೆ.

ಇದನ್ನೂ ಓದಿ; ವರದಕ್ಷಿಣೆ ಕಿರುಕುಳ, ಮಹಿಳೆಯ ಕೊಲೆ

ಮತದಾರರ ಗುರುತಿನ ಚೀಟಿ ಏಕೆ ಅತ್ಯಗತ್ಯ?
ಇದು ರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಗುರುತಿನ ರೂಪವಾಗಿ ಕಾರ್ಯನಿರ್ವಹಿಸುತ್ತದೆ.
ಇದು ಒಬ್ಬರ ಮತದಾರರ ನೋಂದಣಿಯ ದೃಢೀಕರಣವಾಗಿ ಕಾರ್ಯನಿರ್ವಹಿಸುತ್ತದೆ.
ಚುನಾವಣೆಗಳಲ್ಲಿ ಬಹು ಮತದಾನವನ್ನು ಗುರುತಿಸುವಿಕೆಯ ಮೂಲಕ
ಕಡಿಮೆ-ಸಾಕ್ಷರತೆಯ ಜನಸಂಖ್ಯೆಯ ಚುನಾವಣಾ ಅಗತ್ಯಗಳನ್ನು ಪೂರೈಸಲು ಇದನ್ನು ವಿನ್ಯಾಸಗೊಳಿಸಲಾಗಿದೆ.
ಸ್ಥಿರ ವಿಳಾಸವನ್ನು ಹೊಂದಿರದ ಮತದಾರರಿಗೆ ಇದು ಪ್ರಮುಖ ಗುರುತಿನ ಪುರಾವೆಯಾಗಿದೆ. ತಮ್ಮ ಉದ್ಯೋಗದ ಕಾರಣದಿಂದಾಗಿ ಆಗಾಗ್ಗೆ ಚಲಿಸುವ ವ್ಯಕ್ತಿಗಳಿಗೆ ಇದು ಸೂಕ್ತವಾಗಿದೆ. ಇದು ಫೋಟೋ ಗುರುತಿನ ಪುರಾವೆಯಾಗಿರುವುದರಿಂದ, ಇದು ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸುತ್ತದೆ ಮತ್ತು ಚುನಾವಣಾ ವಂಚನೆಯ ಪ್ರಕರಣಗಳನ್ನು ಪರಿಶೀಲಿಸುತ್ತದೆ.

ಇದನ್ನೂ ಓದಿ; ರಸ್ತೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ವಿವಾದ

ಮೊದಲಿಗೆ https://electoralsearch.in ಸೈಟ್ ಭೇಟಿ ನೀಡಿ ಸರ್ಚ್ ಬೈ ಡೀಟೇಲ್ಸ್ ಅನ್ನು ಆಯ್ಕೆ ಮಾಡಿಕೊಳ್ಳಿ. ಬಳಿಕ ನಿಮ್ಮ ಹೆಸರು, ವಯಸ್ಸು, ರಾಜ್ಯ, ಜಿಲ್ಲೆ ಮತ್ತು ಕ್ಯಾಪ್ಚಾ ಕೋಡ್ ನಮೂದಿಸಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಪರದೆಯ ಕೆಳಭಾಗದಲ್ಲಿ ಮಾಹಿತಿ ನೀಡಲಾಗುತ್ತದೆ.

ಇನ್ನೊಂದು ವಿಧಾನ:
ನೀವು ಮತದಾರರ ಗುರುತಿನ ಚೀಟಿ ಹೊಂದಿದ್ದರೆ ಅದರ ಸಂಖ್ಯೆ ಬಳಸುವುದರ ಮೂಲಕ ಪರಿಶೀಲಿಸಬಹುದು.

https://electoralsearch.in ಸೈಟ್ ಗೆ ಭೇಟಿ ನೀಡಿ, ಸರ್ಚ್ ಬೈ ಎಪಿಕ್ ಆಯ್ಕೆ ಮಾಡಿಕೊಳ್ಳಿ. ನಿಮ್ಮ ಗುರುತಿನ ಚೀಟಿಯ ಸಂಖ್ಯೆ, ರಾಜ್ಯ, ಕ್ಯಾಪ್ಚಾ ಕೋಡ್ ನ್ನು ನಮೂದಿಸಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಪರದೆಯ ಕೆಳಭಾಗದಲ್ಲಿ ಜಿಲ್ಲೆ, ವಿಧಾನಸಭಾ ಕ್ಷೇತ್ರ ವಿವರ ಮೂಡುತ್ತದೆ.

ಇದನ್ನೂ ಓದಿ; ಜಿಲ್ಲೆಯ ಹಲವು ಕಡೆ ಬಜರಂಗದಳದ ಕಾರ್ಯಕರ್ತರಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

ಗಮನಿಸಬೇಕಾದ ಸಂಗತಿ ಎಂದರೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಚುನಾವಣೆಗೆ ಕನಿಷ್ಠ 10 ದಿನಗಳ ಮೊದಲು ಪರಿಶೀಲನೆ ಮಾಡಬೇಕು. ಇದರಿಂದ ಯಾವುದೇ ರೀತಿಯ ದೋಷವನ್ನು ಆದಷ್ಟು ಬೇಗ ಸರಿಪಡಿಸಬಹುದು.

Most Popular

Recent Comments